ನಾರಿಮನ್ ಅವರನ್ನು ಮುಂದಿನ ವಾರ ಭೇಟಿ ಮಾಡಿ ಚರ್ಚಿಸಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಸರ್ಕಾರ ನಂತರ ಸೂಕ್ತ ನಿಲುವು ತೆಗೆದುಕೊಳ್ಳಲಿದೆ ಎಂದು ತಿಳಿಸಿದರು. ಪರಿಣತರ ತಂಡ ರಚನೆಯಿಂದಾಗುವ ಸಾಧಕ– ಬಾಧಕ, ಇದರಿಂದ ಕಾವೇರಿ ನ್ಯಾಯಮಂಡಳಿಯ ಅಂತಿಮ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ವಿಶೇಷ ಮೇಲ್ಮನವಿ ಮೇಲೆ ಆಗಲಿರುವ ಪರಿಣಾಮದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ವಿವರಿಸಿದರು.