ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಕೈದಿ ಆನಂದ್ ಸಾವನ್ನಪ್ಪಿದ್ದ. ವರ್ಷದ ಹಿಂದೆ ಪೋಕ್ಸೋ ಕಾಯ್ದೆಯಡಿ ಬಂಧಿಯಾಗಿದ್ದ ಮದ್ದೂರು ತಾಲ್ಲೂಕು ಮಲ್ಲಿಗೆರೆಯ ಆನಂದ್ಗೆ ಮಂಗಳವಾರ ಅನಾರೋಗ್ಯ ಕಾಣಿಸಿಕೊಂಡಿತ್ತು. ಆತನನ್ನ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆನಂದ್ ಅಸುನೀಗಿದ್ದಾನೆ.