ಸಚಿವರ ಶಾಲೆಯಲ್ಲಿ ಆರ್ ಟಿ ಇ ಸೀಟು ಕೊಡಿಸುವ ಭರವಸೆ ನೀಡಿದ ತನ್ವೀರ್ ಸೇಠ್

ಸಚಿವ ಡಿ.ಕೆ ಶಿವಕುಮಾರ್ ಅವರ ಮಾಲೀಕತ್ವದ ಶಾಲೆಯಲ್ಲಿ ಆರ್ ಟಿ ಇ ಅಡಿಯಲ್ಲಿ ಮಕ್ಕಳಿಗೆ ಸೀಟು ಕೊಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷ ಸಚಿವ ತನ್ವೀರ್...
ತನ್ವೀರ್ ಸೇಠ್
ತನ್ವೀರ್ ಸೇಠ್
ಬೆಂಗಳೂರು: ಸಚಿವ ಡಿ.ಕೆ ಶಿವಕುಮಾರ್ ಅವರ ಮಾಲೀಕತ್ವದ ಶಾಲೆಯಲ್ಲಿ ಆರ್ ಟಿ ಇ ಅಡಿಯಲ್ಲಿ ಮಕ್ಕಳಿಗೆ ಸೀಟು ಕೊಡಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷ ಸಚಿವ ತನ್ವೀರ್ ಸೇಠ್ ಭರವಸೆ ನೀಡಿದ್ದಾರೆ.
ರಾಜರಾಜೇಶ್ವರಿ ನಗರದಲ್ಲಿರುವ ಹಿಲ್ ವ್ಯೂ ಶಾಲೆಯಲ್ಲಿ  ಆರ್ ಟಿ ಇ ಸೀಟು ಸಿಗಲಿಲ್ಲವೆಂದು ಆರೋಪಿಸಿ ಪೋಷಕರು ಪ್ರತಿಭಟನೆ ನಡೆಸಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ತನ್ವೀರ್ ಸೇಠ್, ಯಾರೇ ಆದರೂ ಸರ್ಕಾರದ ನಿಯಮಗಳನ್ನು ಉಲ್ಲಂಘಿಸುವಂತಿಲ್ಲ, ನಿಯಮ ಉಲ್ಲಂಘಿಸಿದರೇ ಅಂತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳ ಮೂಲಕ ನನಗೆ ವಿಷಯ ತಿಳಿಯಿತು. ಶೈಕ್ಷಣಿಕಾ ಕಾಯಿದೆಗೆ ತಿದ್ದುಪಡಿ ತರಲಾಗಿದೆ. ಪೋಷಕರು ಸಲ್ಲಿಸುವ ಆದಾಯ ಪ್ರಮಾಣ ಪತ್ರವನ್ನು ಪರಿಶೀಲಿಸಿ ನಂತರ ಶಾಲೆಗೆ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.
ಎಲ್ ಕೆಜಿಗೆ ಈಗಾಗಲೇ ಆರ್ ಟಿ ಇ ಅಡಿಯಲ್ಲಿ ಸೀಟು ಕೊಡಿಸಲಾಗಿದೆ, ಹಾಗಾಗಿ ಈ ವರ್ಷ 1ನೇ ತರಗತಿ ವಿದ್ಯಾರ್ಥಿಗಳಿಗೆ ಆರ್ ಟಿ ಇ ಅಡಿಯಲ್ಲಿ ಸೀಟು ಕೊಡಲು ಸಾಧ್ಯವಿಲ್ಲ ಎಂದು ಡಿ.ಕೆ ಶಿವಕುಮಾರ್ ಮಾಧ್ಯಮಗಳಿಗೆ ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com