ರಾಜರಾಜೇಶ್ವರಿ ನಗರದಲ್ಲಿರುವ ಹಿಲ್ ವ್ಯೂ ಶಾಲೆಯಲ್ಲಿ ಆರ್ ಟಿ ಇ ಸೀಟು ಸಿಗಲಿಲ್ಲವೆಂದು ಆರೋಪಿಸಿ ಪೋಷಕರು ಪ್ರತಿಭಟನೆ ನಡೆಸಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ತನ್ವೀರ್ ಸೇಠ್, ಯಾರೇ ಆದರೂ ಸರ್ಕಾರದ ನಿಯಮಗಳನ್ನು ಉಲ್ಲಂಘಿಸುವಂತಿಲ್ಲ, ನಿಯಮ ಉಲ್ಲಂಘಿಸಿದರೇ ಅಂತ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.