ಕಾರ್ಯಕ್ರಮಕ್ಕೆ ಸರಿಯಾದ ಸಮಯಕ್ಕೆ ಬಂದರೂ ಮುಖ್ಯಮಂತ್ರಿಗಳು ಮಾತ್ರ ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ. ಕೆಲ ಸ್ಥಳೀಯ ನಾಯಕರು ವೇದಿಕೆಯಲ್ಲಿ ಕನ್ನಡದಲ್ಲಿ ಮಾತನಾಡುತ್ತಿದ್ದರು. ಕಾರ್ಯಕ್ರಮದ ಉದ್ದೇಶವನ್ನು ಮರೆತು ಸರ್ಕಾರದ ಯೋಜನೆಗಳು, ಕಾರ್ಯಚಟುವಟಿಕೆಗಳ ಬಗ್ಗೆ ಮಾತನಾಡುತ್ತಿದ್ದರು. ಯುದ್ಧ ಸ್ಮಾರಕದ ಬಗ್ಗೆಯಾಗಲೀ, ಹುತಾತ್ಮ ಯೋಧರ ಬಗ್ಗೆಯಾಗಲೀ ಏನನ್ನೂ ಮಾತನಾಡಲಿಲ್ಲ.