ಕೆರೆ ನೀರನ್ನು ಖಾಲಿ ಮಾಡಿರುವ ಹಿಂದೆ ಮೀನುಗಾರರ ಕೈವಾಡವೂ ಇದೆ ಎಂದು ಕೆಲವು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದು, ಹೆಚ್ಚು ಮೀನುಗಳನ್ನು ಹಿಡಿಯಲು ನೀರನ್ನು ಖಾಲಿ ಮಾಡಿಸಿರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಬರಿದಾಗಿರುವ ಕೆರೆ ಇರುವ ಸ್ಥಳಕ್ಕೆ ಜಿಲ್ಲಾಡಳಿತದ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಇನ್ನು ಮುಂದೆ ಈ ರೀತಿ ನೀರನ್ನು ಪೋಲು ಮಾಡದಂತೆ ಗ್ರಾಮಸ್ಥರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.