ಸಿಂಧನೂರ್: ಬೂದಿಹಾಳ ಕ್ಯಾಂಪ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕಳೆದ ರಾತ್ರಿ ಲಾರಿಯನ್ನು ಓವರ್ ಟೇಕ್ ಮಾಡುವ ವೇಳೆ ಕಾರು ಡಿಕ್ಕಿಯಾಗಿ ಅದರಲ್ಲಿದ್ದ ಕೊಪ್ಪಳದ ಗಂಗಾವತಿ ಮೂಲದ ಐವರು ಸಾವನ್ನಪ್ಪಿದ್ದಾರೆ.
ಮೃತರನ್ನು ಹುಸೇನ್ ಪಾಷಾ, ಪತ್ನಿ ಮಲಾನಾ, ಮಕ್ಕಳಾದ ಸಾಬಿರಾ, ಅಲ್ಫಿಯಾ ಮತ್ತು ಗುಲಾಬಿ ಎಂಬುವರು ಮೃತಪಟ್ಟಿದ್ದಾರೆ. ಇನ್ನು ಕಾರಿನಲ್ಲಿದ್ದ 8 ವರ್ಷದ ಸಾಫಿಯಾ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಸಿಂಧನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.