ರಾಜಕಾಲುವೆಯಲ್ಲಿ ಕೊಚ್ಚಿಹೋದ ಶಾಂತಕುಮಾರ್ ಗೆ ಶೋಧ ಮುಂದುವರಿಕೆ: ಕೆ.ಜೆ.ಜಾರ್ಜ್

ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿಹೋದ ಕಾರ್ಮಿಕ ಶಾಂತಕುಮಾರ್ ನ...
ಸಚಿವ ಕೆ.ಜೆ.ಜಾರ್ಜ್
ಸಚಿವ ಕೆ.ಜೆ.ಜಾರ್ಜ್
ಬೆಂಗಳೂರು: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿಹೋದ ಕಾರ್ಮಿಕ ಶಾಂತಕುಮಾರ್ ನ ಶೋಧ ಕಾರ್ಯ ಮುಂದುವರಿದಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ವಿಪತ್ತು ಕ್ರಿಯಾ ತಂಡ, ಅಗ್ನಿಶಾಮಕ ದಳ, ಪೊಲೀಸರು ಮತ್ತು ನಗರ ಪಾಲಿಕೆ ರಕ್ಷಣಾ ತಂಡ ಹುಡುಕಾಟದಲ್ಲಿ ಇಂದು ನಸುಕಿನಿಂದಲೇ ನಿರತವಾಗಿದೆ ಎಂದು ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಶಾಂತಕುಮಾರ್ ಕಳೆದ ರಾತ್ರಿ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ತಿಗಳರಪಾಳ್ಯದಲ್ಲಿ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದರು. ಇವರು ಬಿಬಿಎಂಪಿ ಗುತ್ತಿಗೆದಾರ ಬಸವರಾಜ್ ಅವರ ಸೋದರಳಿಯ. ಕಾರ್ಮಿಕರಿಗೆ ಕೂಲಿ ನೀಡಿ ಮನೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ರಾಜಕಾಲುವೆಯ ಒಳಹರಿವು ಹೆಚ್ಚಾಗಿದ್ದರಿಂದ ಸುಳಿಯಲ್ಲಿ ಕೊಚ್ಚಿ ಹೋಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com