ಪ್ರಸಕ್ತ ವರ್ಷದಿಂದ ಕಾಲೇಜು ಶಿಕ್ಷಣ ಇಲಾಖೆ ಕಡ್ಡಾಯ ವರ್ಗಾವಣೆಗೆ ಮುಂದಾಗಿದ್ದು, ಇದಕ್ಕಾಗಿ ಅಂತಿಮ ಜೇಷ್ಠತಾ ಪಟ್ಟಿಯನ್ನು ಮತ್ತು ಲಭ್ಯವಿರುವ ಖಾಲಿ ಹುದ್ದೆಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಅಲ್ಲದೆ ಸೇವಾ ಹಿರಿತನದ ಆಧಾರದ ಮೇಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೋಧಕ, ಗ್ರಂಥಪಾಲಕ, ದೈಹಿಕ ಶಿಕ್ಷಕ, ಬೋಧಕೇತರ ಸಿಬ್ಬಂದಿಗೂ ಜೇಷ್ಠತೆ ಆಧರಿಸಿ ಕಡ್ಡಾಯ ವರ್ಗಾವಣೆ ಜಾರಿಗೆ ತರಲು ರಾಜ್ಯದ ಕಾಲೇಜುಗಳನ್ನು ಎ, ಬಿ ಮತ್ತು ಸಿ ಎಂದು ವಲಯವಾರು ಗುರುತಿಸಲಾಗಿತ್ತು.