ಇನ್ನು ಕೇವಲ 1427 ಅಭ್ಯರ್ಥಿಗಳಿಗೆ ಮಾತ್ರ ಸಿಂಧುತ್ವದ ಅವಶ್ಯಕತೆ ಇದ್ದು, ಈಗಾಗಲೇ ಬಹಳಷ್ಟು ಅಭ್ಯರ್ಥಿಗಳ ಸಿಂಧುತ್ವ ಪ್ರಕ್ರಿಯೆಯೂ ಮುಗಿದಿದೆ. ಆದರೆ ಕೆಲವೇ ಕೆಲವು ಅಭ್ಯರ್ಥಿಗಳು ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ನಿರಾಸಕ್ತರಾಗಿದ್ದು, ಇಂತಹ ಅಭ್ಯರ್ಥಿಗಳಿಗಾಗಿ ಸುಮಾರು ಎರಡುವರೆ ವರ್ಷಗಳಿಂದ ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಈ ಕೂಡಲೇ ಸರ್ಕಾರ ಕೌನ್ಸಿಲಿಂಗ್ ನಡೆಸಿ ನೇಮಕಾತಿ ಆದೇಶ ನೀಡಬೇಕು ಎಂದು ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹೋರಾಟ ಸಮಿತಿಯ ಕಾರ್ಯದರ್ಶಿ ಸತೀಶ್ ಅವರು ಒತ್ತಾಯಿಸಿದ್ದಾರೆ.