ತಿವಾರಿ ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕೆಂದು ಆಗ್ರಹಿಸಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸಂಸದೆ ಶೋಭಾ ಕರಂದ್ಲಾಜೆ ಬರೆದ ಪತ್ರದಲ್ಲಿಯೂ ಇದೇ ಅಂಶ ಉಲ್ಲೇಖವಾಗಿದ್ದು, ಹಗರಣವೊಂದರ ಬಗ್ಗೆ ವರದಿ ತಯಾರಿಸಿದ್ದ ತಿವಾರಿ ಅದನ್ನು ಸಿಬಿಐ ಗೆ ನೀಡುವವರಿದ್ದರು. ಆದರೆ ವರದಿ ನೀಡುವ ಮುನ್ನವೇ ಅವರನ್ನು ಹತ್ಯೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಅವರು ತಯಾರಿಸಿದ್ದ ವರದಿ, ವಿಚಾರಣೆಗೆ ಸಂಬಂಧಿಸಿದ ಕಡತಗಳು ಹಾಗೂ ಗೋದಾಮಿನ ಸಿಸಿಟಿವಿ ದೃಶ್ಯಾವಳಿಗಳನ್ನು ನಾಶ ಮಾಡಲಾಗಿದೆ ಎಂದು ಶೋಭಾ ಕರಂದ್ಲಾಜೆ ಪತ್ರದಲ್ಲಿ ಆರೋಪಿಸಿದ್ದಾರೆ.