ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಸುರಿಯುತ್ತಿರುವ ಗಾಳಿ, ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಿಂದ ಅನೇಕ ಕಡೆಗಳಲ್ಲಿ ಮರ, ಕೊಂಬೆಗಳು ಧರೆಗುರುಳುತ್ತಿವೆ. ರಸ್ತೆಗಳಲ್ಲೆಲ್ಲಾ ನೀರು ತುಂಬಿ ಸಾಯಂಕಾಲ ಹೊತ್ತು ವಾಹನ ಸವಾರರಿಗೆ ಸಂಚರಿಸುವುದೇ ವಿಪರೀತ ಕಷ್ಟವಾಗುತ್ತಿರುವ ಸಂದರ್ಭದಲ್ಲಿ ನಾಗರಿಕರು ಬಿಬಿಎಂಪಿ, ಬೆಸ್ಕಾಂ, ಬಿಡಬ್ಲ್ಯುಎಸ್ಎಸ್ ಬಿ ಗಳ ಸಹಾಯವಾಣಿಗಳಿಗೆ ದೂರನ್ನು ಹೊತ್ತು ಕರೆ ಮಾಡುತ್ತಾರೆ.