ಇಂದು ಜವಾಹಾರ್ ಲಾಲ್ ನೆಹರು ಅವರ 51ನೇ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ನೆಹರು ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಸಿಎಂ, ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಈಗಾಗಲೇ ಜಾರಿಯಲ್ಲಿದೆ. ಇದು ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿಗೊಳಪಡುವ ವಿಷಯ. ಹೀಗಾಗಿ, ಆತುರದ ನಿರ್ಧಾರ ಇಲ್ಲ ಎಂದು ತಿಳಿಸಿದರು.