ರಂಗನಾಥಸ್ವಾಮಿ ದೇವಾಲಯ
ರಂಗನಾಥಸ್ವಾಮಿ ದೇವಾಲಯ

ಕುಕ್ಕೆ ಬಳಿಕ ರಂಗನಾಥಸ್ವಾಮಿ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿತ

ಇತ್ತೀಚೆಗಷ್ಟೇ ಕುಕ್ಕೆ ಸುಬ್ರಮಣ್ಯ ದೇವಸ್ತಾನದ ಗೋಪುರಕ್ಕೆ ಸಿಡಿಲು ಬಡಿದಿತ್ತು. ಇದೀಗ ಹಾಸನದ ರಂಗನಾಥ ಸ್ವಾಮಿ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದಿದೆ...
Published on
ಹಾಸನ: ಇತ್ತೀಚೆಗಷ್ಟೇ ಕುಕ್ಕೆ ಸುಬ್ರಮಣ್ಯ ದೇವಸ್ತಾನದ ಗೋಪುರಕ್ಕೆ ಸಿಡಿಲು ಬಡಿದಿತ್ತು. ಇದೀಗ ಹಾಸನದ ರಂಗನಾಥ ಸ್ವಾಮಿ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದಿದೆ. 
ರಾಜ್ಯದಲ್ಲಿ ವಾರದಿಂದ ಭರ್ಜರಿ ಮಳೆಯಾಗುತ್ತಿದೆ. ಬೆಂಗಳೂರು, ದಕ್ಷಿಣ ಕನ್ನಡ, ಹಾಸನದಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುತ್ತಿದ್ದು ಹಾಸನದ ರಂಗನಾಥಸ್ವಾಮಿ ದೇವಸ್ಥಾನದ ರಾಜಗೋಪರಕ್ಕೆ ಸಿಡಿಲು ಬಡಿದಿದೆ. 
ಸಿಡಿಲು ಬಡಿತದಿಂದ ರಾಜಗೋಪುರದ ಸಿಮೆಂಟ್ ಮೂರ್ತಿಗಳಿಗೆ ಹಾನಿಯಾಗಿದೆ ಎಂದು ಕಂದಾಯ ಅಧಿಕಾರಿ ತಿಳಿಸಿದ್ದು ಕೂಡಲೇ ದುರಸ್ಥಿ ಕಾರ್ಯ ನಡೆಸುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com