ಹಾಸನ: ಇತ್ತೀಚೆಗಷ್ಟೇ ಕುಕ್ಕೆ ಸುಬ್ರಮಣ್ಯ ದೇವಸ್ತಾನದ ಗೋಪುರಕ್ಕೆ ಸಿಡಿಲು ಬಡಿದಿತ್ತು. ಇದೀಗ ಹಾಸನದ ರಂಗನಾಥ ಸ್ವಾಮಿ ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದಿದೆ.
ರಾಜ್ಯದಲ್ಲಿ ವಾರದಿಂದ ಭರ್ಜರಿ ಮಳೆಯಾಗುತ್ತಿದೆ. ಬೆಂಗಳೂರು, ದಕ್ಷಿಣ ಕನ್ನಡ, ಹಾಸನದಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುತ್ತಿದ್ದು ಹಾಸನದ ರಂಗನಾಥಸ್ವಾಮಿ ದೇವಸ್ಥಾನದ ರಾಜಗೋಪರಕ್ಕೆ ಸಿಡಿಲು ಬಡಿದಿದೆ.
ಸಿಡಿಲು ಬಡಿತದಿಂದ ರಾಜಗೋಪುರದ ಸಿಮೆಂಟ್ ಮೂರ್ತಿಗಳಿಗೆ ಹಾನಿಯಾಗಿದೆ ಎಂದು ಕಂದಾಯ ಅಧಿಕಾರಿ ತಿಳಿಸಿದ್ದು ಕೂಡಲೇ ದುರಸ್ಥಿ ಕಾರ್ಯ ನಡೆಸುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.