ದತ್ತ ಪೀಠ ವಿವಾದ ಬಗೆಹರಿಸಲು ಸರ್ಕಾರದಿಂದ ಸಮಿತಿ ರಚನೆ

ಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರಿಯಲ್ಲಿರುವ ದತ್ತಪೀಠ ವಿವಾದ ಬಗೆಹರಿಸಲು ತ್ರಿಸದಸ್ಯರನ್ನೊಳಗೊಂಡ ಸಮಿತಿ ರಚಿಸಲು ...
ದತ್ತ ಪೀಠ
ದತ್ತ ಪೀಠ
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್ ಗಿರಿಯಲ್ಲಿರುವ ದತ್ತಪೀಠ ವಿವಾದ ಬಗೆಹರಿಸಲು ತ್ರಿಸದಸ್ಯರನ್ನೊಳಗೊಂಡ ಸಮಿತಿ ರಚಿಸಲು ಸಂಪುಟ ಸಭೆ ಅನುಮತಿ ನೀಡಿದೆ.
ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚನೆಯಾಗಲಿದೆ. ವಿವಾದದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವ ಮತ್ತಿಬ್ಬರನ್ನು ಸಮಿತಿಗೆ ನೇಮಕ ಮಾಡಲಾಗುತ್ತದೆ.
ಬಾಬಾ ಬುಡನ್ ಗಿರಿಯ ದತ್ತ ಪೀಠ ವಿವಾದಕ್ಕೆ ಸಂಬಂಧಿಸಿದಂತೆ ಎರಡೂ ಕಡೆಯವರ ವಾದ ವಿವಾದಗಳನ್ನು ಆಲಿಸಿ, ರಾಜ್ಯ ಸರ್ಕಾರ ಸೂಕ್ತ ತೀರ್ಮಾನಮಾಡಬೇಕು ಎಂದು ಸುಪ್ರೀಂಕೋರ್ಟ್ ಆದೇಶದಂತೆ ಸಮಿತಿ ರಚಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ ಜಯಚಂದ್ರ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com