ಮೈಶುಗರ್ ಕಂಪನಿಯನ್ನು ಆಧುನೀಕರಣಗೊಳಿಸಲು ಸರ್ಕಾರ ಸುಮಾರು 100 ಕೋಟಿ ರು ಅನುದಾನ ನೀಡಿದೆ. ಹಿಂದಿನ ಸಿಎಂ ಗಳಾಗಿದ್ದ ಎಚ್.ಡಿ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಅವರ ಮಾರ್ಗವನ್ನು ಸಿದ್ದರಾಮಯ್ಯ ಅನುಸರಿಸಿದ್ದಾರೆ. ಮೈಶುಗರ್ ಕಂಪನಿಯ ಪುನರುಜ್ಜೀವನ ಗೊಳಿಸಲು ಮಾಜಿ ಸಚಿವರುಗಳಾದ ಅಂಬರೀಷ್ ಮತ್ತು ಎಚ್ ಎಸ್ ಮಹಾದೇವ ಪ್ರಸಾದ್ ಯಾವುದೇ ಪ್ರಯತ್ನ ಮಾಡಲಿಲ್ಲ ಎಂದು ಜಿಲ್ಲೆಯ ಜನ ಬೈಯ್ಯುತ್ತಿದ್ದರು.