ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಕಳೆದ ಕೆಲ ವರ್ಷಗಳಿಂದ ಬರದಿಂದ ಬಸವಳಿದಿರುವ ರಾಜ್ಯಕ್ಕೆ ಮಳೆಯು ನವ ಉತ್ಸಾಹ ತುಂಬಲಿದೆ. ನಮ್ಮ ಜಲಾಶಯಗಳೆಲ್ಲ ಬರಿದಾಗಿವೆ. ಆದರೆ, ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣ ಕೇಂದ್ರದ ವಿಜ್ಞಾನಿ ಎಸ್ಎಸ್ ಎಂ ಗವಾಸ್ಕರ್ ಹೆಳಿದ್ದಾರೆ.