ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಡಾ. ರಾಜ್ ಕುಮಾರ್ ರಸ್ತೆಯ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ

ರಾಜ್‌ಕುಮಾರ್‌ ರಸ್ತೆಯ ವಿವೇಕಾನಂದ ಕಾಲೇಜಿನ ಬಳಿ ನಿರ್ಮಿಸಿರುವ ಕೆಳಸೇತುವೆಯನ್ನು ಸಾರ್ವಜನಿಕರ ಬಳಕೆಗೆ..
Published on
ಬೆಂಗಳೂರು: ರಾಜ್‌ಕುಮಾರ್‌ ರಸ್ತೆಯ ವಿವೇಕಾನಂದ ಕಾಲೇಜಿನ ಬಳಿ ನಿರ್ಮಿಸಿರುವ ಕೆಳಸೇತುವೆಯನ್ನು ಸಾರ್ವಜನಿಕರ ಬಳಕೆಗೆ ಸಮರ್ಪಿಸಲಾಯಿತು.
14.65 ಕೋಟಿ ರು ವೆಚ್ಚದಲ್ಲಿ ನಿರ್ಮಾಣವಾಗಿರುವ ಅಂಡರ್ ಪಾಸ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ  ಉದ್ಘಾಟಿಸಿದರು. ಬೆಂಗಳೂರು ನಗರಾಭಿವೃದ್ಧಿ ಸಚಿವೆ ಕೆ.ಜೆ ಜಾರ್ಜ್ ಕೂಡ ಉಪಸ್ಥಿತರಿದ್ದರು.
ಈ ರಸ್ತೆಯ ಕಾಮಗಾರಿ 2014ರಲ್ಲಿ ಆರಂಭವಾಗಿತ್ತು. 2015ರ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಲು ಗಡುವು ನೀಡಲಾಗಿತ್ತು. ಆದರೆ, ಈ ಅವಧಿಯಲ್ಲಿ ಶೇ 50ರಷ್ಟು ಕಾಮಗಾರಿ ಪೂರ್ಣಗೊಂಡಿರಲಿಲ್ಲ. ಕಾಮಗಾರಿ ವಿಳಂಬದಿಂದ ಈ ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗಿತ್ತು.
‘ರಾಷ್ಟ್ರೀಯ ಹೆದ್ದಾರಿ 4  (ತುಮಕೂರು ರಸ್ತೆ) ಹಾಗೂ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಸ್ಥಳದಲ್ಲಿದ್ದ ಜಲಮಂಡಳಿಯ ಏಳು ಕೊಳವೆಗಳು, ಬೆಸ್ಕಾಂ, ಕೆಪಿಟಿಸಿಎಲ್‌, ಬಿಎಸ್‌ಎನ್‌ಎಲ್‌ಗಳ ಜಾಲಗಳನ್ನು ಸ್ಥಳಾಂತರ ಮಾಡಲಾಗಿದೆ.
ಪಠಾಣ್ ಕೋಟ್ ವಾಯುನೆಲೆಯಲ್ಲಿ ಹುತಾತ್ಮರಾದ ಎನ್ ಎಸ್ ಜಿ ಕಮಾಂಡೋ ಲೆಪ್ಟಿನೆಂಟ್ ಕಲೋನಿಯಲ್ ನಿರಂಜನ್ ಹೆಸರನ್ನು ನಾಮಕರಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com