"ಹಲಗೂರು ಮೂಲದ ನಿತೀಶ್ ಮತ್ತು ರಾಕೇಶ್ ಅವರುಗಳನ್ನು ಈ ಪ್ರಕರಣ ಸಂಬಂಧ ಬಂಧಿಸಲಾಗಿದೆ. ಎರಡು ವರ್ಷಗಳಿಂದ ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು. ದರೋಡೆ ಮಾಡಿದ ಬಳಿಕ ಅವರು ಹಲವಾರು ಸ್ಥಳಗಳನ್ನು ಸುತ್ತಿಕೊಂಡು ಮಳವಳ್ಳಿಗೆ ಬಂದಿದ್ದಾರೆ." ಆರೋಪಿಗಳನ್ನು ಬಂಧಿಸಿರುವ ಮಳವಳ್ಳಿಯ ಪೋಲೀಸ್ ಇನ್ಸ್ ಪೆಕ್ಟರ್ ಗಂಗಾಧರ್ ಹೇಳಿದರು. ‘ಸೆಕ್ಯೂರ್ ಏಜೆನ್ಸಿ’ಯಲ್ಲಿ ಕೆಲಸ ಮಾಡುತ್ತಿದ್ದ ರಾಕೇಶ್ಗೆ, ಅದೇ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿದ್ದ ಸಾಗರ್ ನ ಸ್ನೇಹ ಬೆಳೆಸಿದ್ದ. ತಿಂಗಳ ಹಿಂದೆಯೇ ಎಟಿಎಂ ದರೋಡೆ ಸಂಚು ರೂಪಿಸಿದ್ದ ಅವರು, ಅದಕ್ಕೆ ನಿತೀಶ್ನ ಸಹಾಯ ಪಡೆದರು. ಅದಾಗಲೇ ಸಣ್ಣ ಪುಟ್ಟ ಕಳ್ಳತನ ಮಾಡಿಕೊಂಡಿದ್ದ ನಿತೀಶ್ ದೊಡ್ಡ ಪ್ರಮಾಣದ ಹಣ ಒಟ್ಟಿಗೇ ಸಿಗುವುದೆನ್ನುವ ಆಸೆಯಿಂದ ಈ ಕೃತ್ಯಕ್ಕೆ ಒಪ್ಪಿದ್ದನು.