ಬೆಂಗಳೂರು: ಮಗನ ಸಾವಿನಿಂದ ಖಿನ್ನತೆಗೊಳಗಾಗಿದ್ದ ತಂದೆ ಆತ್ಮಹತ್ಯೆ

ಮಗನ ಸಾವಿನಿಂದ ನೊಂದು ಖಿನ್ನತೆಗೊಳಗಾಗಿದ್ದ ತಂದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಮಗನ ಸಾವಿನಿಂದ ನೊಂದು ಖಿನ್ನತೆಗೊಳಗಾಗಿದ್ದ ತಂದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೆಎಸ್ ಆರ್ ಟಿಸಿ ಲೇಔಟ್ ನ ಮಾರುತಿ ನಗರದಲ್ಲಿ ಫ್ಯಾನ್ಸಿ ಸ್ಟೋರ್ ನಡೆಸುತ್ತಿದ್ದ ಮಂಜುನಾಥ್(45) ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ದಾವಣಗೆರೆಯಲ್ಲಿ ಪಿಯಸಿ ಓದುತ್ತಿದ್ದ ಮಂಜುನಾಥ್ ಪುತ್ರ ಶಶಿ ಎರಡು ತಿಂಗಳ ಹಿಂದೆ ಸಾವನ್ನಪ್ಪಿದ್ದ.ಸೋಮವಾರ ರಾತ್ರಿ ಮನೆಯಿಂದ ತೆರಳಿದ ಮಂಜುನಾಥ್ 1 ಗಂಟೆಯಲ್ಲಿ ವಾಪಸ್ ಬರುವುದಾಗಿ ಪತ್ನಿ ಚಂದ್ರಕಲಾಗೆ ಹೇಳಿ ಹೋಗಿದ್ದಾರೆ.
ಮಂಗಳವಾರ ರಾತ್ರಿಯಾದರೂ ಮಂಜುನಾಥ್ ವಾಪಸ್ ಬಾರದಿದ್ದಾಗ ಚಂದ್ರಕಲಾ ಪೊಲೀಸರನ್ನು ಸಂಪರ್ಕಿಸಿದ್ದಾರೆ, ಈ ವೇಳೆ ಪೊಲೀಸರು ಆಕೆಯ ಬಳಿ ಮಂಜುನಾಥ್ ಫೋಟೋ ಕೇಳಿದ್ದಾರೆ.
ಬುಧವಾರ ಬೆಳಗ್ಗೆ 9.30ರ ವೇಳೆಗೆ ಆಕೆ ಫ್ಯಾನ್ಸಿ ಸ್ಟೋರ್ ನಲ್ಲಿ ಫೋಟೋ ತೆಗೆದುಕೊಳ್ಳಲು ಹೋಗಿದ್ದಾರೆ. ಅಂಗಡಿಯ ಶಟರ್ ಒಳಗಿನಿಂದ ಲಾಕ್ ಆಗಿತ್ತು. ಜೊತೆಗೆ ಒಳಗಿನಿಂದ ವಾಸನೆ ಬರುತ್ತಿತ್ತು.
ಈ ವೇಳೆ ಸ್ಥಳಕ್ಕಾಗಮಿಸಿದ ನೆರೆಹೊರೆಯವರು, ಶಟರ್ ಒಪನ್ ಮಾಡಿದಾಗ ಮಂಜುನಾಥ್ ದೇಹ ಪತ್ತೆಯಾಗಿದೆ. ಈ ವೇಳೆ ಮಗನ ಸಾವಿನಿಂದಾಗಿ ತನ್ನ ಪತಿ ಖಿನ್ನತೆಗೊಳಗಾಗಿದ್ದರು ಎಂದು ಚಂದ್ರಕಲಾ ಪೊಲೀಸರಿಗೆ ತಿಳಿಸಿದ್ದಾರೆ. ಬೈದರಹಳ್ಳಿ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com