ಸಿಎಂ ಘೋಷಣೆ ಮಾಡಿದ ಮರುದಿನವೇ ಮುಚ್ಚಿದ 8 ಕನ್ನಡ ಶಾಲೆಗಳು!

ಒಬ್ಬ ವಿದ್ಯಾರ್ಥಿಯಿದ್ದರೂ ಕೂಡ ಕನ್ನಡ ಶಾಲೆಯನ್ನು ಮುಚ್ಚುವುದಿಲ್ಲ ಎಂದು ರಾಜ್ಯೋತ್ಸವದ ದಿನ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ, ಬೆಂಗಳೂರು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಒಬ್ಬ ವಿದ್ಯಾರ್ಥಿಯಿದ್ದರೂ ಕೂಡ ಕನ್ನಡ ಶಾಲೆಯನ್ನು ಮುಚ್ಚುವುದಿಲ್ಲ ಎಂದು ರಾಜ್ಯೋತ್ಸವದ ದಿನ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ, ಬೆಂಗಳೂರು ದಕ್ಷಿಣ ವಲಯದ 8 ಕನ್ನಡ ಶಾಲೆಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. 
ಸಾರ್ವಜನಿಕ ಶಿಕ್ಷಣ ಇಲಾಖೆ ಅನುದಾನಿತ 8 ಕನ್ನಡ ಶಾಲೆಗಳನ್ನು ಮುಚ್ಚುವಂತೆ ಸುತ್ತೋಲೆ ಹೊರಡಿಸಿದೆ.  ಈ ಶಾಲೆಗಳಲ್ಲಿ 25 ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಕಾರಣ ಶಾಲೆ ಮುಚ್ಚುವಂತೆ ಸುತ್ತೋಲೆ ಹೊರಡಿಸಲಾಗಿದೆ.
ಶಾಲೆಯೊಂದರಲ್ಲಿ ಕನಿಷ್ಠ 25 ವಿದ್ಯಾರ್ಥಿಗಳಿರುವುದು ಕಡ್ಡಾಯವಾಗಿದೆ, ಆದರೆ ಕಳೆದ ಮೂರು ವರ್ಷಗಳಿಂದ ಈ ಶಾಲೆಗಳಲ್ಲಿ ಅಷ್ಟು ಪ್ರಮಾಣದ ವಿದ್ಯಾರ್ಥಿಗಳಿಲ್ಲ,ಹೀಗಾಗಿ ಶಾಲೆಗಳನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಒಬ್ಬ ವಿದ್ಯಾರ್ಥಿ ಇದ್ದರೂ ತರಗತಿ ನಡೆಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. 1983 ರ ಕರ್ನಾಟಕ ಶಿಕ್ಷಣ ಕಾಯ್ದೆ ನಿಯಮದ ಅನ್ವಯ, ನೋಟಿಸ್ ನೀಡಲಾಗಿದೆ ಎಂದು ಹೇಳಲಾಗಿದೆ. ಕಳೆದ ಒಂದು ತಿಂಗಳಿಂದ ನೋಟೀಸ್ ಕಳುಹಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com