ಹಂಪಿ ಉತ್ಸವದ ಕಾರಣೀಕರ್ತರಾದ ಎಂ.ಪಿ ಪ್ರಕಾಶ್ ಅವರ ಸ್ಮರಣಾರ್ಥವಾಗಿ ನಿರ್ಮಿಸಲಾಗಿದ್ದ ವೇದಿಕೆಯಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕಲಾವಿದರು ಪ್ರದರ್ಶನಗಳನ್ನು ನೀಡಿದ್ದರು.
ಸಮಾರೋಪ ಭಾಷಣ ಮಾಡಿದ ಸಚಿವ ಸಂತೋಷ್ ಲಾಡ್ ಅವರು, ಹಂಪಿ ಉತ್ಸವ ಇಷ್ಟೊಂದು ಖ್ಯಾತಿ ಪಡೆದುಕೊಳ್ಳುತ್ತಿದೆ. ಅದಕ್ಕೆ ಪ್ರಮುಖ ಕಾರಣ ದಿವಂಗತ ಎಂ.ಪಿ. ಪ್ರಕಾಶ್ ಅವರು ಎಂದು ಸ್ಮರಿಸಿದರು.
ವರ್ಷದಿಂದ ವರ್ಷಕ್ಕೆ ಉತ್ಸವ ಜನಾಕರ್ಷಣೀಯವಾಗುತ್ತಿದ್ದು, ಪ್ರಸಕ್ತ ವರ್ಷ 5 ಲಕ್ಷಕ್ಕೂ ಹೆಚ್ಚು ಮಂದಿ ಉತ್ಸವಕ್ಕೆ ಆಗಮಿಸಿದ್ದಾರೆ. ಕಳೆದ ವರ್ಷ ಜಿಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು 365 ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಈ ಬಾರಿ 405 ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಹಂಪಿ ಉತ್ಸವಕ್ಕೆ ಬಹುತೇಕ ಯುವಕರೇ ಆಗಮಿಸಿದ್ದು ಪ್ರಮುಖವಾಗಿದೆ. ಭವಿಷ್ಯದಲ್ಲಿ ಮತ್ತಷ್ಟು ಯುವಕರನ್ನು ಆಕರ್ಷಿಸಲು ಕಾರ್ಯಗಳನ್ನು ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.