ಕಬಿನಿ ರೆಸಾರ್ಟ್ ಬಳಿ ಹುಲಿ ಪ್ರತ್ಯಕ್ಷ: ಭೀತಿಯಲ್ಲಿ ಜನತೆ

ಕಬಿನಿಯ ಜಂಗಲ್ ರೆಸಾರ್ಟ್ ಬಳಿ ಹುಲಿಯೊಂದು ಪ್ರತ್ಯಕ್ಷವಾಗಿದ್ದು, ಹುಲಿ ಪ್ರತ್ಯಕ್ಷವಾಗಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಹಾಗೂ ಪ್ರವಾಸಿಗರು ಭೀತಿಗೊಳಗಾಗಿದ್ದಾರೆ...
ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿರುವ ಹುಲಿ
ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿರುವ ಹುಲಿ
ಮೈಸೂರು: ಕಬಿನಿಯ ಜಂಗಲ್ ರೆಸಾರ್ಟ್ ಬಳಿ ಹುಲಿಯೊಂದು ಪ್ರತ್ಯಕ್ಷವಾಗಿದ್ದು, ಹುಲಿ ಪ್ರತ್ಯಕ್ಷವಾಗಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಹಾಗೂ ಪ್ರವಾಸಿಗರು ಭೀತಿಗೊಳಗಾಗಿದ್ದಾರೆ. 
ಹೆಗ್ಗದೇವನ ಕೋಟೆ ತಾಲೂಕಿನಲ್ಲಿರುವ ಕಬಿನಿಯ ಜಂಗಲ್ ರೆಸಾರ್ಟ್ ನಿನ್ನೆ ಹುಲಿಯೊಂದು ಕಾಣಿಸಿಕೊಂಡಿದೆ. ಹುಲಿ ಓಡಾಡುತ್ತಿರುವ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಹುಲಿಯನ್ನು ಕಂಡಿರುವ ಹೋಟೆಲ್ ಆಡಳಿತ ಮಂಡಳಿಯವರು ಕೂಡಲೇ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಸುತ್ತಮುತ್ತಲಿನ ಪ್ರದೇಶದಲ್ಲಿ ಓಡಾಡದಂತೆ ಪ್ರವಾಸಿಗರಿಗೆ ಸೂಚನೆ ನೀಡಿದ್ದಾರೆ. 
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಭಿಮನ್ಯು ಹಾಗೂ ಅರ್ಜುನ ಆನೆಯೊಂದಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ. ಇದೀಗ ಹುಲಿಗಾಗಿ ಅರ್ಜುನ ಹಾಗೂ ಅಭಿಮನ್ಯು ಹುಡುಕಾಟ ಆರಂಭಿಸಿದ್ದು, ಕಾರ್ಯಾಚರಣೆಯನ್ನು ಮುಂದುವರೆಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ. 
ಅರಣ್ಯದೊಳಗೆ ಹುಲಿ ಹೋಗಿರುವ ಶಂಕೆಗಳು ವ್ಯಕ್ತವಾಗಿದ್ದು, ಹುಲಿಗಾಗಿ ಹುಡುಕಾಟ ನೆಡಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com