ಕುಂದಾಪುರ: ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಸಂಭವಿಸಬಹುದಾಗಿದ್ದ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿ ಹೋಗಿದೆ. ಮೀನುಗಾರಿಕೆಗಾಗಿ ತೆರಳಿದ್ದ ಬೋಟ್ ಒಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿದ್ದು ಬೆಂಕಿ ಕೆನ್ನಾಲಿಗೆಯಿಂದ ಇಡಿಯ ಬೋಟ್ ಭಸ್ಮವಾಗಿದೆ. ಆದರೆ ಅದೃಷ್ಟವಶಾತ್ ಅದರಲ್ಲಿದ್ದ 10 ಮಂದಿ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ.