ಗಂಗೊಳ್ಳಿ: ಮೀನುಗಾರಿಕೆಗಿಳಿದಿದ್ದ ಬೋಟ್ ಬೆಂಕಿಗಾಹುತಿ, 10 ಮೀನುಗಾರರ ರಕ್ಷಣೆ

ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಸಂಭವಿಸಬಹುದಾಗಿದ್ದ ರದುರಂತವೊಂದು ಸ್ವಲ್ಪದರಲ್ಲೇ ತಪ್ಪಿ ಹೋಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಕುಂದಾಪುರ: ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಸಂಭವಿಸಬಹುದಾಗಿದ್ದ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿ ಹೋಗಿದೆ. ಮೀನುಗಾರಿಕೆಗಾಗಿ ತೆರಳಿದ್ದ ಬೋಟ್‌ ಒಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡಿದ್ದು ಬೆಂಕಿ ಕೆನ್ನಾಲಿಗೆಯಿಂದ ಇಡಿಯ ಬೋಟ್ ಭಸ್ಮವಾಗಿದೆ. ಆದರೆ ಅದೃಷ್ಟವಶಾತ್ ಅದರಲ್ಲಿದ್ದ 10 ಮಂದಿ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. 
ಸಮುದ್ರಕ್ಕಿಳಿದಿದ್ದ ಬೋಟ್ ಗೆ ಬೆಂಕಿ ಹೊತ್ತಿಕೊಂಡಿದ್ದ ಸಮಯದಲ್ಲಿ ಅಲ್ಲಿದ್ದ ಬೇರೆ ಬೋಟ್ ನ ಮೀನುಗಾರರು ತಾವೇ ರಕ್ಷಣಾ ಕಾರ್ಯಕ್ಕಿಳಿದು ಬೋಟಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಶಾರ್ಟ್‌ ಸರ್‌ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದಾಗಿ ಹೇಳಲಾಗುತ್ತಿದ್ದು ಬೋಟ್ ಸಂಪೂರ್ಣವಾಗಿ ಭಸ್ಮವಾಗಿದೆ.ಐದರಿಂದಾಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com