ಗುಂಡ್ಲುಪೇಟೆ: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಹಿಂಬಂದಿ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ.
ದೇವರಹಳ್ಳಿ ಗ್ರಾಮಸ್ಥರಾದ ಮೂರ್ತಿ (30) ಮೃತ ದುರ್ದೈವಿಯಾಗಿದ್ದು ಗಾಯಗೊಂಡಿದ್ದ ಹಿಂಬದಿ ಸವಾರರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿಸಗಿದೆ,
ಬೈಕಿನಲ್ಲಿ ಗ್ಯಾಸ್ ತೆಗೆದುಕೊಂಡು ಗುಂಡ್ಲುಪೇಟೆಯ ಹಂಗಳ ಗ್ರಾಮದಿಂದ ದೇವರಹಳ್ಳಿ ಗೆ ಬರುತ್ತಿರುವಾಗ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಮೂರ್ತಿ ಬಸ್ ನ ಚಕ್ರದಡಿಯಲ್ಲಿ ಸಿಕ್ಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.