ಮಾಧ್ಯಮವೊಂದು ವರದಿ ಮಾಡಿರುವಂತೆ ಇಂದಿರಾ ಸಾರಿಗೆ ಹೆಸರಿನಲ್ಲಿ ನೂತನ ಸಾರಿಗೆ ಯೋಜನೆಯನ್ನು ಜಾರಿಗೆ ತರಲು ರಾಜ್ಯ ಸಾರಿಗೆ ಇಲಾಖೆ ನಿರ್ಧರಿಸಿದ್ದು. ಈ ಯೋಜನೆ ಅನ್ವಯ ಈ ಇಂದಿರಾ ಸಾರಿಗೆ ಯೋಜನೆಯ ಬಸ್ ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಶೇ.50 ಟಿಕೆಟ್ ದರ ರಿಯಾಯಿತಿ ನೀಡಲು ಮುಂದಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾಧ್ಯಮಗಳಿದೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಸಾರಿಗೆ ಸಚಿವ ಎಚ್ ಎಂ ರೇವಣ್ಣ ಅವರು, ಪ್ರಸ್ತುತ ಸರ್ಕಾರದ ಈ ಯೋಜನೆ ಇನ್ನೂ ಚರ್ಚಾ ಹಂಚದಲ್ಲಿದೆ. ಮಹಿಳೆಯರಿಗೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಈ ಯೋಜನೆ ಜಾರಿಗೆ ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.