ಡಾ.ಅಜಯ್ ಕುಮಾರ್ ಅವರು ಮಾತನಾಡಿ, ಮಸೂದೆಯಲ್ಲಿ ನಾಲ್ಕು ಪ್ರಮುಖ ಅಂಶಗಳಿದ್ದು, ಅವುಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಷ್ಕರಣೆ ನಡೆಸಬೇಕಿದೆ. ಜಿಲ್ಲಾ ಮಟ್ಟದಲ್ಲಿ ಯಾವುದೇ ದೂರುಗಳ ಪರಿಹಾರ ಸಮಿತಿ ಇರಬಾರದು. ರೋಗಿಯ ಹಕ್ಕು ಕೇವಲ ಮಾರ್ಗದರ್ಶಿಯಾಗಿರಬೇಕೇ ಹೊರತು ಕಾನೂನು ಆಗಿರಬಾರದು. ಚಿಕಿತ್ಸೆಗಳು, ಚಿಕಿತ್ಸಾ ಪ್ರಕ್ರಿಯೆಗಳಿಗೆ ಸರ್ಕಾರ ಶುಲ್ಕವನ್ನು ನಿಗದಿ ಮಾಡಬಾರದು. ವೈದ್ಯರನ್ನು ಅಪರಾಧಿಗಳಂತೆ ನೋಡಬಾರದು ಮತ್ತು ಆಧಾರಗಳಿಲ್ಲದೆ ಅವರನ್ನು ಜೈಲಿಗೆ ಕಳುಹಿಸಬಾರದು ಎಂದು ಹೇಳಿದ್ದಾರೆ.