ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ವ್ಯಕ್ತಿ ಸಾವು

ನಿಷೇಧದ ನಡುವೆಯೇ ಶಿವಮೊಗ್ಗ ಜಿಲ್ಲೆಯ ಆಯನೂರು ಕೋಟೆ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನಡೆಸಲಾಗಿದ್ದು,....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ನಿಷೇಧದ ನಡುವೆಯೇ ಶಿವಮೊಗ್ಗ ಜಿಲ್ಲೆಯ ಆಯನೂರು ಕೋಟೆ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನಡೆಸಲಾಗಿದ್ದು, ಈ ವೇಳೆ ಹೋರಿಯೊಂದು ತಿವಿದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ನಡೆದಿದೆ. 
ಇಂದು ಆಯನೂರು ಕೋಟೆಯಲ್ಲಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ನೂರಾರು ಹೋರಿಗಳು ಭಾಗವಹಿಸಿದ್ದವು. ಈ ವೇಳೆ ಹೋರಿಯೊಂದು ಸಿಟ್ಟಿಗೆದ್ದು ಏಕಾಏಕಿ ವೀಕ್ಷಕರ ಸಾಲಿನಲ್ಲಿ ನಿಂತಿದ್ದ ಬಾಳೆಕೊಪ್ಪದ ಚಂದ್ರಶೇಖರ್‌ (40)ಅವರತ್ತ ನುಗ್ಗಿ ಬಂದು ಮರ್ಮಾಂಗಕ್ಕೆ ಬಲವಾಗಿ ತಿವಿದಿದೆ. 
ಹೋರಿ ತಿವಿತದಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ ಚಂದ್ರಶೇಖರ್‌ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಂದ್ರಶೇಖರ್ ಅವರು ಮೃತಪಟ್ಟಿದ್ದಾರೆ.
ಈ ಸಂಬಂಧ ಕುಂಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com