ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಗೌರಿಯವರನ್ನು ಹತ್ಯೆ ಮಾಡಿದ ಹಂತಕರನ್ನು ಹಿಡಿಯಲು ವಿಶೇಷ ತನಿಖಾ ದಳ ಎಲ್ಲಾ ರೀತಿಯ ಶ್ರಮ ಪಡುತ್ತಿದೆ ಎಂಬ ವಿಚಾರ ನಮಗೂ ತಿಳಿದಿದೆ. ಪ್ರಕರಣದ ತನಿಖೆ ಕುರಿತಂತೆ ಅಧಿಕಾರಿಗಳು ನಮ್ಮೊಂದಿಗೆ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಆದರೆ, ಹತ್ಯೆಯಾಗಿ 2 ತಿಂಗಳು ಕಳೆದಿದೆ. ಆದರೂ ಯಾವುದೇ ರೀತಿಯ ಫಲಿತಾಂಶಗಳು ಸಿಕ್ಕಿಲ್ಲ ಎಂದು ತಿಳಿಸಿದ್ದಾರೆ.