ಕೆಪಿಎಂಇ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ವೈದ್ಯಕೀಯ ಸಂಘ, ಹಲವು ದಿನಗಳಿಂದಲೂ ಪ್ರತಿಭಟನೆಗಳನ್ನು ನಡೆಸುತ್ತಿದೆ. ಬೆಳಗಾವಿಯ ಸುವರ್ಣಸೌಧದ ಮುಂದೆಯೂ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾನಿರತ ವೈದ್ಯರನ್ನು ನಿನ್ನೆಯಷ್ಟೇ ಆರೋಗ್ಯ ಸಚಿವ ಕೆ.ಆರ್. ರಮೇಶ್ ಕುಮಾರ್ ಅವರು ಭೇಟಿ ಮಾಡಿದ್ದಾರೆ.