ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ಸದ್ದು ಮಾಡುತ್ತಿರುವ ಚಿತ್ರ ಉಪ್ಪು ಹುಳಿ ಖಾರ ಚಿತ್ರ ಮುಂದಿನ ವಾರ ತೆರೆಗೆ ಬರುತ್ತಿದ್ದು, ಚಿತ್ರ ಬಿಡುಗಡೆ ಕುರಿತು ಮಾಹಿತಿ ನೀಡುವ ನಿಟ್ಟಿನಲ್ಲಿ ಚಿತ್ರ ತಂಡ ನಗರದ ಖಾಸಗಿ ಹೋಟೆಲ್ ವೊಂದರಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿತ್ತು. ಈ ಸುದ್ದಿಗೋಷ್ಠಿಗೆ ಹಾಜರಾಗಿರುವ ಅಂಬರೀಶ್ ಅವರು ನಟಿ ಅನುಶ್ರೀ ಹಾಗೂ ಮಾಲಾಶ್ರೀ ಅವರೊಂದಿಗೆ ನೃತ್ಯ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿಹಾಡುತ್ತಿದ್ದು, ಅಧಿವೇಶಕ್ಕೆ ಹಾಜರಾಗದೆ, ನಟಿಯರೊಂದಿಗೆ ಹೆಜ್ಜ ಹಾಕಿರುವ ಅಂಬರೀಶ್ ಅವರ ಈ ನಡೆಗೆ ಟೀಕೆಗಳು ವ್ಯಕ್ತವಾಗುತ್ತಿವೆ.