ಇದೇ ವೇಳೆ ವಿವಾದ ಸಂಬಂಧ ಮಾತನಾಡಿದ ರಮೇಶ್ ಕುಮಾರ್ ಅವರು, ಸರ್ಕಾರ ಕೆಪಿಎಂಇ ಕಾಯ್ದೆ ವಿಚಾರದಲ್ಲಿ ರಾಜಕೀಯ ಬೆರೆಸುತ್ತಿಲ್ಲ. ದುಬಾರಿ ಖಾಸಗಿ ಆಸ್ಪತ್ರೆಗಳ ವೈದ್ಯಕೀಯ ಸೇವೆಗಳ ದುಬಾರಿ ದರಗಳಿಗೆ ಕಡಿವಾಣ ಹಾಕಬೇಕು ಎಂಬ ಉದ್ದೇಶದಿಂದ ತಿದ್ದುಪಡಿಗೆ ಮುಂದಾಗಿದ್ದೇವೆ. ಕಾಯ್ದೆ ಜಾರಿಯಲ್ಲಿ ಸರ್ಕಾರಕ್ಕಾಗಲಿ ಅಥವಾ ನನಗಾಗಲಿ ಪ್ರತಿಷ್ಠೆ ಇಲ್ಲ. ಇಂದಿಗೂ ಸರ್ಕಾರ ವೈದ್ಯರೊಂದಿಗೆ ಚರ್ಚೆಗೆ ಸಿದ್ಧವಿದೆ. ನಾವೆಲ್ಲರೂ ಜನರಿಂದ ಜನರಿಗಾಗಿ ಆಯ್ಕೆಯಾದವರು. ಹೀಗಾಗಿ ಜನರಿಗೆ ಒಳ್ಳೆಯದು ಬೆಕು ಎಂಬುದನ್ನು ಯೋಚಿಸೋಣ.