ಖಾಸಗಿ ವೈದ್ಯರ ಮುಷ್ಕರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಹೆಚ್. ಜಿ ರಮೇಶ್ ಹಾಗೂ ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ, ಜನಸಾಮಾನ್ಯರ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ಮುಷ್ಕರ ಮುಂದುವರಿಸಬೇಡಿ, ಖಾಸಗಿ ವೈದ್ಯರು ತಕ್ಷಣವೇ ಮುಷ್ಕರ ನಿಲ್ಲಿಸಬೇಕೆಂದು ಸೂಚನೆ ನೀಡಿತ್ತು. ಅಲ್ಲದೆ ನಾಳೆ ಸಮಸ್ಯೆ ಇತ್ಯರ್ಥಪಡಿಸಿ ವೈದ್ಯಕೀಯ ಸೇವ ಸಹಜ ಸ್ಥಿತಿಗೆ ಬರುವಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.