ಗುರುವಾರ ಬೆಳಗ್ಗೆ 9,30ರ ವೇಳೆಗೆ ಅಪಘಾತ ಸಂಭವಿಸಿದ್ದು, ಹಾರೋಹಳ್ಳಿ ಕಡೆಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಶಾಲಾ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್ ಚಾಲಕ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ. ಕೆಎಸ್ ಆರ್ ಟಿಸಿ ಬಸ್ ನಲ್ಲಿ 30 ಪ್ರಯಾಣಿಕರಿದ್ದು, ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ರಾಮನಗರ ಡಿವೈಎಸ್ ಪಿ ತಮ್ಮಯ್ಯ ಹೇಳಿದ್ದಾರೆ.