ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮುಂದುವರೆದಿರುವ ಹಿನ್ನಲೆಯಲ್ಲಿ ರೋಗಿಗಳ ಪರದಾಟ ಮುಂದುವರೆದಿದ್ದು, ಇಂದು ಕೂಡ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಕೊರಟೆಗೆರೆಯಲ್ಲಿ ವ್ಯಕ್ತಿಯೋರ್ವ ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದು, ಬಾಗಲಕೋಟೆಯಲ್ಲಿ ಮಹಿಳೆಯೊಬ್ಬರು ಕೀವ್ರ ರಕ್ತದೊತ್ತಡದಿಂದಾಗಿ ಸಾವನ್ನಪ್ಪಿದ್ದಾರೆ. ಮೃತ ಮಹಿಳೆಯನ್ನು ಮುಗಳಖೋಡ ತಾಲೂಕಿನ ಆಶಾಬಿ ಲಢಾಖನಾ ಎಂದು ಗುರುತಿಸಲಾಗಿದೆ. ಅಂತೆಯೇ ಚಳ್ಳಕೆರೆಯಲ್ಲಿ ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಮಕ್ಕಳು ಸೂಕ್ತ ಚಿಕಿತ್ಸೆ ದೊರೆಯದೇ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.