ಖಾಸಗಿ ವೈದ್ಯರ ವೃತ್ತಿಗೆ ಮಾರಕವಾಗುವ ಯಾವುದೇ ರೀತಿಯ ಅಂಶಗಳು ತಿದ್ದುಪಡಿ ಕಾಯ್ದೆಯಲ್ಲಿಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡುತ್ತಿದ್ದರೂ, ಖಾಸಗಿ ಆಸ್ಪತ್ರೆ ವೈದ್ಯರು ಮಾತ್ರ ಇನ್ನೂ ತಮ್ಮ ಪ್ರತಿಭಟನೆ ಕೈ ಬಿಟ್ಟಿಲ್ಲ. ಇನ್ನು ಈಗಾಗಲೇ ರಾಜ್ಯ ಸರ್ಕಾರ ಕೆಪಿಎಂಇ ತಿದ್ದುಪಡಿ ಕಾಯ್ದೆಯಲ್ಲಿ ವಿವಾದಕ್ಕೆ ಕಾರಣವಾಗ ಬಲ್ಲ ಅಥವಾ ಖಾಸಗಿ ವೈದ್ಯರ ವಿರೋಧಕ್ಕೆ ಕಾರಣವಾಗಬಲ್ಲ ಅಂಶಗಳನ್ನು ಕೈಬಿಟ್ಟಿರುವುದಾಗಿ ಹೇಳಿದೆ. ಹೀಗಿದ್ದೂ ಪ್ರತಿಭಟನೆ ಮಾತ್ರ ಮುಂದುವರೆದಿದೆ.