ಕೋಲಾರ ಜಿಲ್ಲೆ ಬಂಗಾರಪೇಟೆಯ ಬಲಮಂದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಯುವಕನೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದರೆ ಇನ್ನೊಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಮಸಮುದ್ರ ಗ್ರಾಮದ ನಿವಾಸಿ ಸುರೇಶ್ (22) ಮೃತಪಟ್ಟಿದ್ದು ಮಸ್ತಾನ್ ಎನ್ನುವ ಇನ್ನೋರ್ವ ಯುವಕ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಇಬ್ಬರೂ ನಿನ್ನೆ ರಾತ್ರಿ ಬೈಕಿನಲ್ಲಿ ತಮ್ಮ ಗ್ರಾಮದತ್ತ ತೆರಳುತ್ತಿದ್ದರು.