ಪ್ರತಿಭಟನೆಯಲ್ಲಿ ಭಾಗಿಯಾಗುವ ಮೂಲಕ ವೈದ್ಯರು ನಿರ್ಲಕ್ಷ್ಯವನ್ನು ತೋರಿದ್ದು, ಕಳೆದ ನಾಲ್ಕು ದಿನಗಳಲ್ಲಿ ಸಕಾಲಕ್ಕೆ ಚಿಕಿತ್ಸೆ ದೊರಕದೆ ರಾಜ್ಯದಲ್ಲಿ ಸಂಭವಿಸಿದ 51 ರೋಗಿಗಳ ಸಾವಿಗೆ ರವೀಂದ್ರ ಅವರು ಜವಾಬ್ದಾರರರಾಗಿದ್ದಾರೆ. ಹೀಗಾಗಿ ವೈದ್ಯರಿಗೆ ನೋಟಿಸ್ ಜಾರಿ ಮಾಡಬೇಕಿದ್ದು, ತನಿಖೆ ನಡೆಸಬೇಕಿದೆ ಎಂದು ದೂರಿನಲ್ಲಿ ನಟರಾಜ ಅವರು ಹೇಳಿಕೊಂಡಿದ್ದಾರೆ.