ಕಲ್ಲಿದ್ದಲು ಕೊರತೆಯಿಂದ ವಿದ್ಯುತ್ ಉತ್ಪಾದನೆ ಮೇಲೆ ಉಂಟಾಗಿರುವ ಪ್ರತಿಕೂಲ ಸ್ಥಿತಿಯ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ ಬಳಿಕ ಪತ್ರಕರ್ತರೊಡನೆ ಮಾತನಾಡಿದ ಅವರು "ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇದೆ. ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ದಿನನಿತ್ಯದ ಅಗತ್ಯಕ್ಕೆ ಎಷ್ಟು ಅಗತ್ಯವೋ ಅಷ್ಟು ಮಾತ್ರ ಕಲ್ಲಿದ್ದಲು ಪೂರೈಕೆಯಾಗುತ್ತಿದ್ದು ಪೂರೈಕೆಯಲ್ಲಿ ತುಸು ಏರುಪೇರಾದರೂ ಉತ್ಪಾದನೆ ಸ್ಥಗಿತಗೊಳ್ಳುವ ಸ್ಥಿತಿ ಇದೆ. ಆಗ ವಿದ್ಯುತ್ ಕಡಿತ ಅನಿವಾರ್ಯವಾಗಲಿದೆ" ಎಂದರು.