ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ ನಡೆದ ಇಂದಿರಾಗಾಂಧಿಯವರ 100ನೇ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದೇಶಕ್ಕಾಗಿ ಪ್ರಾಣವನ್ನು ನೀಡಿದ ಇಂದಿರಾ ಗಾಂಧಿ ಮಹಾನ್ ನಾಯಕಿಯಾಗಿದ್ದು, ಅವರ ಹೆಸರಿನಲ್ಲಿ ಬಡವರ ಹಸಿವು ನೀಗಿಸುವುದಕ್ಕಾಗಿ ರಾಜ್ಯದಾದ್ಯಂತ 300 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುತ್ತದೆ. ಜ.1ರಿಂದ ಈ ಎಲ್ಲಾ ಕ್ಯಾಂಟೀನ್ ಆರಂಭಗೊಳ್ಳಲಿವೆ. ಬೆಂಗಳೂರಿನ ಇಂದಿರಾ ಕ್ಯಾಂಟೀನ್ ಗಳಲ್ಲಿ ಈವರೆಗೆ 1 ಕೋಟಿಗೂ ಹೆಚ್ಚು ಜನ ಊಟ, ಉಪಾಹಾರ ಮಾಡಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮಕ್ಕೂ ಅವರೇ ಪ್ರೇರಣೆ ಎಂದು ತಿಳಿಸಿದರು.