ಮಂಡ್ಯ ಜಿಲ್ಲೆಯ ಬಿಜೆಎಸ್ ವೃತ್ತದಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ನಾಗಮಂಗಲದಲ್ಲಿ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ತೆರಳುತ್ತಿದ್ದರು,. ಸಿಎಂ ಸಿದ್ದರಾಮಯ್ಯ ಹಾಗೂ ಅವರ ಬೆಂಗಾವಲು ಪಡೆ ವಾಹನಗಳು ಬಿಜಿಎಸ್ ವೃತ್ತದತ್ತ ಆಗಮಿಸುತ್ತಿದ್ದಂತೆಯೇ ಬಿಜಿಎಸ್ ವೃತ್ತದ ಟಿಬಿ ಎಕ್ಸ್ ಟೆಂಷನ್ ಬಳಿಯ ಟ್ರಾಫಿಕ್ ಪೊಲೀಸರು ಎಲ್ಲ ವಾಹನಗಳನ್ನು ತಡೆದು ಸಿಎಂ ವಾಹನದ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.