ಇಂದು ಬೆಳಗ್ಗೆಯಿಂದಲೇ ಶಾಲೆ ಬಳಿ ಜಮಾಯಿಸಿದ ಪೋಷಕರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಬಂದು ಆರೋಗ್ಯ ವಿಚಾರಿಸಿದ್ದೀರಾ, ಮಕ್ಕಳ ಬಗ್ಗೆ ಕಾಳಜಿ ಇದೆಯೇ ಎಂದು ಪ್ರಶ್ನಿಸುತ್ತಿದ್ದಾರೆ. ಮಾಜಿ ಶಾಸಕ ಎಲ್. ಆರ್. ಶಿವರಾಮೇ ಗೌಡ ಅವರ ಒಡೆತನದ ಶಾಲೆ ಇದಾಗಿದ್ದು, ಇದೀಗ ಅವರು ಶಾಲೆಗೆ ಆಗಮಿಸಿ ಪೋಷಕರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.