ನ.13ರಿಂದ ನ.24ರವರೆಗೆ ಒಟ್ಟು 10 ದಿನಗಳ ಕಾಲ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆದಿದ್ದು, ಚಳಿಗಾಲದ ಅಧಿವೇಶನದಲ್ಲಿ 224 ಶಾಸಕರಲ್ಲಿ ಅರ್ಧದಷ್ಟು ಶಾಸಕರು ಹಾಗೂ 75 ವಿಧಾನ ಪರಿಷತ್ ಸದಸ್ಯರಲ್ಲಿ 35ಕ್ಕೂ ಹೆಚ್ಚು ಸದಸ್ಯರು ಕಲಾಪದಿಂದ ದೂರ ಉಳಿದಿದ್ದಾರೆ. ಈ ಮೂಲಕ ಉತ್ತರ ಕರ್ನಾಟಕ ಭಾಗದ ಬಹುಬೇಡಿಕೆಯಾದ ಮಹದಾಯಿ ಸಮಸ್ಯೆಗೆ ಈ ಸಲ ಪರಿಹಾರ ಸಿಗಬಹುದು ಎಂಬ ಜನರ ನಿರೀಕ್ಷೆ ಹುಸಿಯಾಗಿದೆ. ಶಿಕ್ಷಣ, ರಸ್ತೆ, ವಿದ್ಯುತ್, ಆರೋಗ್ಯ, ಉದ್ಯೋಗ ಸೇರಿದಂತೆ ಇನ್ನಿತರ ಸಮಸ್ಯೆಗಳ ಕುರಿತ ಪರಿಹಾರಕ್ಕೆ ಯಾವೊಬ್ಬ ಜನಪ್ರತಿನಿಧಿಗಳು ಈ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದೇ ಇರುವುದು ಇದೀಗ ಜನರ ಅಸಮಾಧಾನಕ್ಕೆ ಕಾರಣವಾಗಿದೆ.