ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ಚಂಪಾ ಅವರು, ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವಿರ್ ಸೇಠ್ ಗೈರಾಗಿರುವುದನ್ನು ಖಂಡಿಸಿದರು. ತನ್ವೀರ್ಸೇಠ್ ಸರಿಯಿಲ್ಲ, ಇಂದಿನ ಸಾಹಿತ್ಯ ಸಮ್ಮೇಳನಕ್ಕು ಬಂದಿಲ್ಲ, ಅವರ ಖಾತೆಯನ್ನು ಈ ಕೂಡಲೇ ಬದಲಾವಣೆ ಮಾಡಬೇಕು ಎಂದು ಸಿಎಂಗೆ ಮನವಿ ಮಾಡಿದರು.