ಯೋಗೀಶ್ ಗೌಡ ಕುಟುಂಬದ ಆರೋಪದ ಬಗ್ಗೆ ಇಂದು ಸುವರ್ಣಸೌಧದಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ವಿನಯ್ ಕುಲಕರ್ಣಿ, ಬಿಜೆಪಿ ನಾಯಕರು ಅನಗತ್ಯವಾಗಿ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ನನ್ನ ಹೆಸರು ಎಳೆಯುತ್ತಿದ್ದಾರೆ. ಈ ಕೊಲೆಗೆ ನನಗೂ ಯಾವುದೇ ಸಂಬಂಧವಿಲ್ಲ. ಪ್ರತ್ಯೇಕ ಲಿಂಗಾಯತ ಧರ್ಮದ ಸಮಾವೇಶದಿಂದ ನನ್ನ ಹಿಂದೆ ಸರಿಯುವಂತೆ ಮಾಡಲು ಬಿಜೆಪಿ ಈ ಸಂಚು ರೂಪಿಸಿದೆ ಎಂದು ಆರೋಪಿಸಿದ್ದಾರೆ.