ನಮ್ಮ ದೇಶದ ಪ್ರಜಾಪ್ರಭುತ್ವ ತತ್ವಗಳನ್ನು ಎತ್ತಿಹಿಡಿಯುವ ಜಾತ್ಯತೀತ ಪಕ್ಷಗಳಿಗೆ ಬೆಂಬಲ ನೀಡಬೇಕೆಂದು ಕರೆನೀಡಿದ ಸಮ್ಮೇಳನಾಧ್ಯಕ್ಷ ಪ್ರೊ.ಚಂಪಾ, ದೇಶ ಏಕಪಕ್ಷೀಯ ನಿರ್ಧಾರದಿಂದ ಮುನ್ನಡೆಯಲು ಸಾಧ್ಯವಿಲ್ಲ ಎಂದರು. ಬುದ್ಧಿಜೀವಿಗಳು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ವಿರುದ್ಧ ನಡೆಯುವ ದಾಳಿಯನ್ನು ಬಲವಾಗಿ ಟೀಕಿಸಿದ ಅವರು, ಇದು ದೇಶ ವಿರೋಧಿ ಕೃತ್ಯ ಎಂದರು. ಪ್ರಾದೇಶಿಕ ವಿಚಾರಗಳಿಗೆ ಪ್ರಾಮುಖ್ಯತೆ ನೀಡುವ ದೇಶೀಯ ಪಕ್ಷಗಳಿಗೆ ಮತ ಹಾಕಬೇಕು ಎಂದು ಜನರಿಗೆ ಮನವಿ ಮಾಡಿದರು. ಕಳೆದ ದಶಕದಿಂದ ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಲಾಗುತ್ತಿದ್ದು, ಹಿಂದೆಯೇತರ ಭಾಷೆಗಳನ್ನು ಮಾತನಾಡುವ ಜನರ ಮೇಲೆ ಕೂಡ ಅದನ್ನು ಕಡ್ಡಾಯವಾಗಿ ಹೇರಲಾಗುತ್ತಿದೆ ಎಂದು ಆಪಾದಿಸಿದರು.