ನಿರ್ಣಯವನ್ನು ಸುದ್ದಿಗಾರರಿಗೆ ಬಹಿರಂಗಪಡಿಸಿದ ವಿಶ್ವ ಹಿಂದೂ ಪರಿಷತ್ತಿನ ಜಂಟಿ ಕಾರ್ಯದರ್ಶಿ ಡಾ. ಸುರೇಂದ್ರ ಕುಮಾರ್ ಜೈನ್, ಕೇರಳ, ಕರ್ನಾಟಕ, ತಮಿಳುನಾಡು ಮತ್ತು ಮುಖ್ಯವಾಗಿ ಬಿಜೆಪಿ ಆಡಳಿತವಿರುವ ಹರ್ಯಾಣಗಳಲ್ಲಿ ದೇವಸ್ಥಾನಗಳ ಆಡಳಿತವನ್ನು ಪಡೆದುಕೊಳ್ಳಲು ಸರ್ಕಾರಗಳು ಯತ್ನಿಸುತ್ತಿದ್ದು ಇದು ಸರಿಯಲ್ಲ ಎಂದು ಧಾರ್ಮಿಕ ಮುಖಂಡರು ಹೇಳಿದ್ದಾರೆ. ದೇವಸ್ಥಾನಗಳನ್ನು ಗುರಿಯಾಗಿಟ್ಟುಕೊಂಡು ಅಲ್ಲಿನ ಮುಖ್ಯ ಹುದ್ದೆಗಳನ್ನು ರಾಜಕೀಯ ವ್ಯಕ್ತಿಗಳಿಗೆ ನೀಡುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿರುವ ಸಾಧು ಸಂತರು ಸರ್ಕಾರ ಏಕೆ ಕೇವಲ ದೇವಸ್ಥಾನಗಳನ್ನು ಗುರಿಯಾಗಿಟ್ಟುಕೊಳ್ಳುತ್ತದೆ, ಚರ್ಚ್, ಮಸೀದಿಗಳನ್ನು ಪ್ರಶ್ನಿಸುವುದಿಲ್ಲ. ಅಲ್ಲಿ ಕೂಡ ಅನೈತಿಕ ಚಟುವಟಿಕೆಗಳು ನಡೆಯುತ್ತವೆ ಎಂದು ಕೇಳಿದ್ದಾರೆ ಎಂದು ತಿಳಿಸಿದರು.