ಬೆಂಗಳೂರು: ಈಜಲು ತೆರಳಿದ್ದ ಇಬ್ಬರು ಬಾಲಕರು ನ್ ಈರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ವೈಟ್ ಫೀಲ್ಡ್ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸೈಯದ್(13), ಜಾಹೀದ್(13) ಎನ್ನುವ ಬಾಲಕರು ಬೋರಗುಂಡ ಬಳಿ ಇರುವ ಕಲ್ಲು ಕ್ವಾರಿಯ ಬಂಡೆಗಳ ನಡುವೆ ನಿಂತಿದ್ದ ನೀರಿನಲ್ಲಿ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ. ಘಟನೆ ಸಂಬಂಧ ವೈಟ್ಫೀಲ್ಡ್ ಠಾಣೆ ಪೊಲೀಸರು ಪ್ರಕರಣ ದಾಕಲಿಸಿಕೊಂಡು ತನಿಖೆ ನಡೆಸಿದ್ದಾರೆ.